ಬಾಬು ಜಗಜೀವನ್ ರಾಮ್ ಅಧ್ಯಯನ ಪೀಠ
- ಮುಖಪುಟ
- ಅಧ್ಯಯನ ಪೀಠಗಳು
- ಬಾಬು ಜಗಜೀವನ್ ರಾಮ್ ಅಧ್ಯಯನ ಪೀಠ
ಪರಿಚಯ
ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರೀಯ ನಾಯಕ ಮತ್ತು ಭಾರತದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರು ಸ್ವಾತಂತ್ರ್ಯಾನಂತರ ಸುದೀರ್ಘ ಕಾಲ ಕೇಂದ್ರ ಸಚಿವ ಸಂಪುಟದಲ್ಲಿದ್ದು ದೇಶ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಬಾಬೂಜಿಯವರ ಪೀಠವನ್ನು 23.08.2012 ರಂದು ಸ್ಥಾಪಿಸಲಾಯಿತು. ಬಾಬು ಜಗಜೀವನರಾಮ್ ಅವರ ಚಿಂತನೆಗಳಿಗೆ ಸಂಬಂಧಿಸಿದ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳನ್ನು ನಡೆಸುವುದು ಮುಖ್ಯ ಉದ್ದೇಶವಾಗಿದೆ.
ಧ್ಯೇಯ :
- ಡಾ. ಬಾಬು ಜಗಜೀವನರಾಮ್ ಅವರ ಆಲೋಚನೆಗಳು, ಆದರ್ಶಗಳು ಮತ್ತು ಸಾಧನೆಗಳನ್ನು ಅರ್ಥಮಾಡಿಕೊಳ್ಳಲು ಸಮಾಜವನ್ನು ಸಕ್ರಿಯಗೊಳಿಸುವುದು
ಕಾರ್ಯಯೋಜನೆಗಳು:
- ಡಾ.ಬಾಬು ಜಗಜೀವನರಾಂ ಅವರ ಸಾಧನೆಗಳು, ವಿಚಾರಗಳು ಮತ್ತು ಆದರ್ಶಗಳ ಕುರಿತು ವಿಚಾರ ಸಂಕಿರಣ, ಸಮ್ಮೇಳನ, ಕಾರ್ಯಾಗಾರ ಮತ್ತು ಚಟುವಟಿಕೆಗಳನ್ನು ಆಯೋಜಿಸುವ ಮೂಲಕ ಜ್ಞಾನವನ್ನು ನೀಡುವುದು.
- ಆರೋಗ್ಯ, ಪರಿಸರ ಮತ್ತು ಕೃಷಿ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲು.
- ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವುದು
- ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳಿಗೆ ವಿವಿಧ ಸರ್ಕಾರಿ ಕಾರ್ಯಕ್ರಮಗಳ ಕುರಿತು ವಿದ್ಯಾರ್ಥಿಗಳು ಮತ್ತು ಸಮುದಾಯದ ಜನರಲ್ಲಿ ಅರಿವು ಮೂಡಿಸುವುದು.
- ಎಸ್ಸಿ, ಎಸ್ಟಿ ಮತ್ತು ಹಿಂದುಳಿದ ಸಮುದಾಯದ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಸಮಸ್ಯೆಗಳು ಮತ್ತು ಸಮಸ್ಯೆಗಳ ಕುರಿತು ಸಂಶೋಧನಾ ಅಧ್ಯಯನಗಳು ಮತ್ತು ಯೋಜನೆಗಳನ್ನು ಕೈಗೊಳ್ಳಲು.
- ಸಂಬಂಧಿತ ಶೈಕ್ಷಣಿಕ ಕಾರ್ಯಕ್ರಮಗಳನ್ನು ಪರಿಚಯಿಸಲು

ನಮ್ಮ ಬಗ್ಗೆ
ಜಗಜೀವನ್ ರಾಮ್ (5 ಏಪ್ರಿಲ್ 1908 - 6 ಜುಲೈ 1986), ಬಾಬೂಜಿ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಇವರು ಬಿಹಾರದ ಭಾರತೀಯ ಸ್ವಾತಂತ್ರ್ಯ ಹೋರಾಟಗಾರ ಮತ್ತು ರಾಜಕಾರಣಿ. ಅವರು 1935 ರಲ್ಲಿ ಅಸ್ಪೃಶ್ಯರಿಗೆ ಸಮಾನತೆಯನ್ನು ಸಾಧಿಸಲು ಮೀಸಲಾದ ಆಲ್ ಇಂಡಿಯಾ ಡಿಪ್ರೆಸ್ಡ್ ಕ್ಲಾಸಸ್ ಲೀಗ್ನ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದರು ಮತ್ತು 1937 ರಲ್ಲಿ ಬಿಹಾರ ವಿಧಾನಸಭೆಗೆ ಆಯ್ಕೆಯಾದರು, ನಂತರ ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.

ಡಾ.ಶರಣಮ್ಮ .ಆರ್
ಸಂಯೋಜಕರು
ಚಟುವಟಿಕೆಗಳು
• ವಿಸ್ತರಣ ಕೇಂದ್ರದ ಉದ್ಘಾಟನೆ ಮತ್ತು ಉಪನ್ಯಾಸ ಕಾರ್ಯಕ್ರಮ
ದಿನಾಂಕ: 02.05.2015 ಡಾ. ಬಾಬು ಜಗಜೀವನರಾಮ್ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾಕೇಂದ್ರದಿಂದ ಉದ್ಘಾಟನಾ ಕಾರ್ಯಕ್ರಮದ ಜೊತೆಗೆ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
• ಡಾ.ಬಾಬು ಜಗಜೀವನ್ ರಾಮ್ ಅವರ 110ನೇ ಜನ್ಮ ದಿನಾಚರಣೆ
•: 28.04.2017 ಡಾ.ಬಾಬು ಜಗಜೀವನರಾಮ್ ಅವರ 110ನೇಜಯಂತೋತ್ಸವದ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಉಪನ್ಯಾಸಕರು, ವಿದ್ಯಾರ್ಥಿಗಳು, ವಿಶ್ವವಿದ್ಯಾನಿಲಯದ ಬೋದಕೇತರ ನೌಕರರು, ಸಾರ್ವಜನಿಕರು. ಸಮುದಾಯದ ಗಣ್ಯರು ಭಾಗವಹಿಸಿದ್ದರು.
• ಡಾ.ಬಾಬು ಜಗಜೀವನ್ ರಾಮ್ ಅವರ 112ನೇ ಜನ್ಮ ದಿನಾಚರಣೆ
ದಿನಾಂಕ: 04.05.2019 ಡಾ.ಬಾಬು ಜಗಜೀವನರಾಂ ಅವರ 112ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಉಪನ್ಯಾಸಕರು, ವಿದ್ಯಾರ್ಥಿಗಳು, ವಿಶ್ವವಿದ್ಯಾನಿಲಯದ ಬೋದಕೇತರ ನೌಕರರು, ಸಾರ್ವಜನಿಕರು. ಸಮುದಾಯದ ಗಣ್ಯರು ಭಾಗವಹಿಸಿದ್ದರು.
• ಡಾ.ಬಾಬು ಜಗಜೀವನ್ ರಾಮ್ ಅವರ 33ನೇ ಪುಣ್ಯ ಸ್ಮರಣೆ
ದಿನಾಂಕ: 19.08.2019 ಡಾ.ಬಾಬು ಜಗಜೀವನರಾಮ್ ಅವರ 33 ನೇ ಪುಣ್ಯ ಸ್ಮರಣೆ ಪ್ರಯುಕ್ತ “ಬಾಬೂಜಿಯವರ ಜೀವನ ಮತ್ತು ಸಾಧನೆಗಳ ಕುರಿತು ವಿಶೇಷ ಉಪನ್ಯಾಸ ನಡೆಸಲಾಯಿತು. ಉಪನ್ಯಾಸಕರು, ವಿದ್ಯಾರ್ಥಿಗಳು, ವಿಶ್ವವಿದ್ಯಾನಿಲಯದ ಬೋದಕೇತರ ನೌಕರರು, ಸಾರ್ವಜನಿಕರು. ಸಮುದಾಯದ ಗಣ್ಯರು ಭಾಗವಹಿಸಿದ್ದರು.
• ಡಾ.ಬಾಬು ಜಗಜೀವನ್ ರಾಮ್ ಅವರ 36ನೇ ಪುಣ್ಯ ಸ್ಮರಣೆ
ದಿನಾಂಕ: 06.07.2022 ಡಾ. ಬಾಬು ಜಗಜೀವನ ರಾಮ್ ಅವರ 36ನೇ ವರ್ಷದ ಪುಣ್ಯಸ್ಮರಣೆಯನ್ನು ಮೈಸೂರು ರೈಲು ನಿಲ್ದಾಣದ ಬಳಿಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಮನ ಸಲ್ಲಿಸಲಾಯಿತು. ಉಪನ್ಯಾಸಕರು, ವಿದ್ಯಾರ್ಥಿಗಳು, ವಿಶ್ವವಿದ್ಯಾನಿಲಯದ ಬೋದಕೇತರ ನೌಕರರು, ಸಾರ್ವಜನಿಕರು ಸಮುದಾಯದ ಗಣ್ಯರು ಭಾಗವಹಿಸಿದ್ದರು. ದಿನಾಂಕ: 06.07.2022 ರಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಡಾ. ಬಾಬು ಜಗಜೀವನರಾಮ್ ಅಧ್ಯಯನ ಮತ್ತು ವಿಸ್ತರಣಾ ಕೇಂದ್ರದಲ್ಲಿ ಅವರ ಪುಣ್ಯಸ್ಮರಣೆಯ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವವನ್ನು ಸಲ್ಲಿಸಲಾಯಿತು.
ಘಟನೆಗಳು / ಸುತ್ತೋಲೆಗಳು
ಯಾವುದೇ ಡೇಟಾ ಲಭ್ಯವಿಲ್ಲ
















